ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಬೆಂಬಲ ಬೆಲೆ ಕಾಯ್ದೆ ಜಾರಿ:

ಕೃಷಿಕರಿಗೆ ಕೃಷಿ ಸಲಕರಣೆಗಳ ವಿತರಣೆ..

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಬೆಂಬಲ ಬೆಲೆ ಕಾಯ್ದೆ ಜಾರಿ:

ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ..

ಬೆಳಗಾವಿ, : “ದೇಶದ ಆಹಾರ ಸ್ವಾವಲಂಬನೆಗೆ ಶ್ರಮಿಸುತ್ತಿರುವ ರೈತರಿಗೆ ಬೆಂಬಲ ಬೆಲೆ‌ ಕೊಡುವುದು ಸರಕಾರದ ಕರ್ತವ್ಯವಾಗಿದೆ, ದೇಶದಾದ್ಯಂತ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ.) ಕಾಯ್ದೆ ಜಾರಿಗೆ ರೈತರು ಹೋರಾಟ ನಡೆಸುತ್ತಿದ್ದಾರೆ, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಎಂ.ಎಸ್.ಪಿ. ಕಾಯ್ದೆ ಜಾರಿಗೆ ತರಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕೃಷಿ ಇಲಾಖೆಯ ಆಶ್ರಯದಲ್ಲಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗುರುವಾರ(ಮಾ‌. 6) ನಡೆದ ಕಾರ್ಯಕ್ರಮದಲ್ಲಿ ಬೆಳಗಾವಿ ವಿಭಾಗದ ಫಲಾನುಭವಿ ರೈತರಿಗೆ ವಿವಿಧ ಕೃಷಿ ಸಲಕರಣೆಗಳು ಮತ್ತು ಸೌಲಭ್ಯಗಳನ್ನು ವಿತರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಇದರಲ್ಲಿ 196 ತಾಲ್ಲೂಕುಗಳು ತೀವ್ರ ಬರಪೀಡಿತವಾಗಿವೆ.
ಒಟ್ಟಾರೆ 18,171 ಕೋಟಿ ಬೆಳೆಹಾನಿಯಾಗಿದ್ದು, ಪರಿಹಾರ ಒದಗಿಸುವಂತೆ ಕೋರಿ ಕೇಂದ್ರ ಸರಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ನೆರವು ನೀಡಿಲ್ಲ ಎಂದು ಹೇಳಿದರು.

ರೈತರಿಗೆ ತಲಾ 2 ಸಾವಿರದಂತೆ ರಾಜ್ಯ ಸರಕಾರ ತಾತ್ಕಾಲಿಕವಾಗಿ 631 ಕೋಟಿ ರೂಪಾಯಿ ನೆರವು ನೀಡಿದೆ,
ಹಿಂದಿನ ಸರಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಕೃಷಿಹೊಂಡ ಯೋಜನೆಯನ್ನು ಕೂಡ ಇದಕ್ಕೂ ಮುಂಚಿನ ಸರಕಾರ ಸ್ಥಗಿತಗೊಳಿಸಿತ್ತು. ಈ ಬಾರಿ 200 ಕೋಟಿ ರೂಪಾಯಿ ಒದಗಿಸುವ ಮೂಲಕ ಕೃಷಿಭಾಗ್ಯ ಯೋಜನೆಗೆ ಮರುಚಾಲನೆ ನೀಡಲಾಗಿದೆ.

900 ಕೋಟಿ ಮೊತ್ತದ ಕೃಷಿ ಸಲಕರಣೆ ವಿತರಣೆ:

ಬೆಳಗಾವಿ ವಿಭಾಗಮಟ್ಟದಲ್ಲಿ 2700 ರೈತರಿಗೆ 13.12 ಕೋಟಿ ರೂಪಾಯಿ ಮೊತ್ತದ ವಿವಿಧ ಬಗೆಯ ಕೃಷಿ ಸಲಕರಣೆಗಳನ್ನು ನೀಡಲಾಗುತ್ತಿದೆ. ಇದೇ ರೀತಿ ರಾಜ್ಯದಾದ್ಯಂತ ಒಟ್ಟಾರರ 900 ಕೋಟಿಗಿಂತ ಅಧಿಕ ಮೊತ್ತದ ಸಲಕರಣೆಗಳನ್ನು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಆಧುನಿಕ ಯಂತ್ರೋಪಕರಣಗಳ ಮೂಲಕ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಸಹಾಯಧನದ ಮೂಲಕ ಸಲಕರಣೆಗಳನ್ನು ನೀಡಲಾಗುತ್ತಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ರೈತರಿಗೆ ಆಧುನಿಕ ಬೇಸಾಯ ಪದ್ಧತಿ ಅಳವಡಿಸಿಕೊಳ್ಳಲು ಅನುಕೂಲವಾಗಲಿದೆ ಎಂದರು.

ಸೂಕ್ಷ್ಮ ನೀರಾವರಿ ಅಳವಡಿಸಿಕೊಂಡಿರುವ ರೈತರಿಗೂ ಸಬ್ಸಿಡಿ ಆಧಾರಿತ ಯಂತ್ರೋಪಕರಣ ನೀಡಲಾಗುತ್ತಿದೆ. ಸಮಗ್ರ ಕೃಷಿ ಪದ್ಧತಿ ಅಭಿವೃದ್ಧಿಗೆ ಸರಕಾರ ಪ್ರೋತ್ಸಾಹ ನೀಡುತ್ತಿದೆ.

ನೀರಾವರಿ, ಕೃಷಿ ಪದ್ಧತಿ, ಬೆಳೆಗೆ ನ್ಯಾಯಯುತ ಬೆಲೆ ಒದಗಿಸುವುದು ಸೇರಿದಂತೆ ರೈತರ ಹಿತರಕ್ಷಣೆಗೆ ಸರಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಮಾತನಾಡಿ, “ಸೈನಿಕ, ಕಾರ್ಮಿಕ, ಶಿಕ್ಷಕ ಹಾಗೂ ರೈತರು ಸಮಾಜದ ಆಧಾರಸ್ತಂಭ. ರೈತರ ಬದುಕು ಹಸನಾಗಿಸಲು ಕೃಷಿ ಇಲಾಖೆಯ ವತಿಯಿಂದ ಹತ್ತಾರು ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ, ಕಬ್ಬು ಕಟಾವು ಯಂತ್ರ, ಟ್ರ್ಯಾಕ್ಟರ್, ಬೀತ್ತೇನೆ ಯಂತ್ರ ಸೇರಿದಂತೆ ಕೋಟ್ಯಾಂತರ ಮೊತ್ತದ ಸಲಕರಣೆಗಳನ್ನು ನೀಡಲಾಗುತ್ತಿದೆ ಎಂದರು..

ರೈತರಿಗೆ ಕೃಷಿ ಸೌಲಭ್ಯ ನೀಡುತ್ತಿರುವುದು ಇದು ನಮ್ಮ ಸೈಭಾಗ್ಯ, ರೈತರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸವನ್ನು ನಮ್ಮ ಸರ್ಕಾರ ಹೆಮ್ಮೆಯಿಂದ ಮಾಡುತ್ತಲಿದೆ, ರೈತರೂ ಕೂಡಾ ನಮ್ಮ ಪಕ್ಷಕ್ಕೆ ಆಧಾರವಾಗಿ ನಿಲ್ಲಬೇಕು ಎಂದರು..

ಬೆಳಗಾವಿ ವಿಭಾಗದ ಮಟ್ಟದ ಕಾರ್ಯಕ್ರಮದಲ್ಲಿ 2763 ರೈತರಿಗೆ 13 ಕೋಟಿ ಮೊತ್ತದ ಕೃಷಿ ಸಲಕರಣೆಗಳನ್ನು ನೀಡಲಾಗುತ್ತಿದೆ ಎಂದರ

ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚುವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಆಸಿಫ್(ರಾಜು) ಸೇಠ್, ಸವದತ್ತಿ ಶಾಸಕ‌ ವಿಶ್ವಾಸ್ ವೈದ್ಯ, ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಬೈಲಹೊಂಗಲ ಶಾಸಕ‌ ಮಹಾಂತೇಶ ಕೌಜಲಗಿ, ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ, ಕೃಷಿ ಇಲಾಖೆಯ ಕಾರ್ಯದರ್ಶಿ ಅನ್ಬುಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಕೃಷಿ ಆಯುಕ್ತರಾದ ವೈ.ಎಸ್.ಪಾಟೀಲ ಅವರು ಸ್ವಾಗತಿಸಿದರು.

ಕೂರಿಗೆ, ನೇಗಿಲು ಮತ್ತಿತರ ಸಲಕರಣೆ ವಿತರಣೆ:

ಮುಖ್ಯಮಂತ್ರಿಗಳು ವಿಭಾಗದ ವ್ಯಾಪ್ತಿಯ ಏಳು ಜಿಲ್ಲೆಯ 2700 ರೈತರಿಗೆ 13.12 ಕೋಟಿ ರೂಪಾಯಿ ಮೊತ್ತದ ವಿವಿಧ ಬಗೆಯ ಕೃಷಿ ಸಲಕರಣೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿತರಿಸಿದರು.

ಸಕ್ಕರೆ ಕಾರ್ಖಾನೆಗೆ ಸಾಗಿಸುವ ಕಬ್ಬು ತೂಕ ಮಾಡಲು ಡಿಜಿಟಲ್ ಯಂತ್ರ ಅಳವಡಿಸಲು ಆಯವ್ಯದಲ್ಲಿ ಘೋಷಿಸಿರುವ ಹಿನ್ನೆಲೆಯಲ್ಲಿ ರೈತ ಸಂಘದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಯಿತು.

ಬೆಳಗಾವಿ ವಿಭಾಗದ ವ್ಯಾಪ್ತಿಯ ಏಳು ಜಿಲ್ಲೆಗಳ ರೈತ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವರದಿ ಪ್ರಕಾಶ್ ಕುರಗುಂದ..