ಟಿಳಕವಾಡಿಯಲ್ಲಿ ಕಲಾಮಂದಿರ ವಾಣಿಜ್ಯ ಮಳಿಗೆ ಉದ್ಘಾಟನಾ ಸಮಾರಂಭ..

ಟಿಳಕವಾಡಿಯಲ್ಲಿ ಕಲಾಮಂದಿರ ವಾಣಿಜ್ಯ ಮಳಿಗೆ ಉದ್ಘಾಟನಾ ಸಮಾರಂಭ..

ಉದ್ಯೋಗ ಸೃಷ್ಟಿಯೊಂದಿಗೆ ಪಾಲಿಕೆಗೆ ಆದಾಯ ಕೂಡಾ ಬರುತ್ತದೆ..

ಮುಖ್ಯಮಂತ್ರಿ ಸಿದ್ದರಾಮಯ್ಯ..

ಬೆಳಗಾವಿ : ಸ್ಮಾರ್ಟ್ ಸಿಟಿ ಯೋಜನೆಯಡಿ ಬಹುಪಯುಕ್ತವಾದ ಕಲಾಮಂದಿರ ಮತ್ತು ವಾಣಿಜ್ಯ ಮಳಿಗೆಯನ್ನು ಲೋಕಾರ್ಪಣೆಗೊಳಿಸಲಾಗಿದೆ. ಈ ವೇಳೆ ಅನೇಕ ಗಣ್ಯರು ಮಾತನಾಡಿದ್ದು ಮೊದಲಿಗೆ ಮುಖ್ಯಮಂತ್ರಿ ಅವರು ಮಾತನಾಡಿ, ಇದರಿಂದ ಉದ್ಯೋಗ ಸೃಷ್ಟಿಯ ಜತೆ ಆದಾಯ ಕೂಡ ಬರಲಿದೆ.
ಈ ಆದಾಯವನ್ನು ನಗರದ ಅಭಿವೃದ್ಧಿಗೆ ಬಳಕೆ ಮಾಡಲಾಗುವುದು.
ಮಳಿಗೆಗಳನ್ನು ಹರಾಜು ಮಾಡಿ ಅದರಿಂದ ಬರುವ ಆದಾಯ ನಗರದ‌ ಅಭಿವೃದ್ಧಿಗೆ ಬಳಕೆ ಮಾಡಬೇಕು ಎಂದು ತಿಳಿಸಿದರು.

ಕೇಂದ್ರ ಮತ್ತು ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ-ಕೇಂದ್ರ ಸರಕಾರಗಳು ತಲಾ ಶೇ.50 ರಷ್ಟು ಅನುದಾನವನ್ನು ಒದಗಿಸಿವೆ.

ಬೆಳಗಾವಿ ನಗರದಲ್ಲಿ ಇನ್ನು ಬಾಕಿ ಉಳಿದ ಕೆಲ ಕಾಮಗಾರಿಗಳು ಕೆಲವೇ ದಿನಗಳಲ್ಲಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು.

ಹಿಂದಿನ ಸರಕಾರದ ಅವಧಿಯಲ್ಲಿಯೇ ಪೌರಕಾರ್ಮಿಕರನ್ನು ಖಾಯಂ ಮಾಡಲು ನಿರ್ಧರಿಸಲಾಗಿತ್ತು.
ಗುತ್ತಿಗೆದಾರರ ಬದಲಾಗಿ ನೇರ ನೇಮಕಾತಿ ಮೂಲಕ ಕನಿಷ್ಠ 17 ಸಾವಿರ ರೂಪಾಯಿ ವೇತನ ನೀಡಲಾಗುತ್ತಿದೆ. ಪೌರಕಾರ್ಮಿಕರ ಖಾಯಂ ಗೊಳಿಸುವ ಪ್ರಕ್ರಿಯೆ‌ ಚಾಲ್ತಿಯಲ್ಲಿದೆ.
ಇದಲ್ಲದೇ ಚಾಲಕರು, ನಿರ್ವಾಹಕರಿಗೂ ಕನಿಷ್ಠ‌ ವೇತನ ನೀಡಲು ಕ್ರಮ ಕೈಗೊಳ್ಳಲಾಗಿದೆ.
ಎಲ್ಲ ವಿಕಲಚೇತನರಿಗೆ ತ್ರಿಚಕ್ರ ವಾಹನ ನೀಡಲು ನಿರ್ಧರಿಸಲಾಗಿದೆ.

ಹಲಗಾ ಎಸ್.ಟಿ.ಪಿ. ಹೆಚ್ಚಿನ ಪರಿಹಾರದ ಭರವಸೆ:

ಹಲಗಾ ಎಸ್.ಟಿ.ಪಿ. ಕಾಮಗಾರಿಗೆ ಸಂಬಂಧಿಸಿದಂತೆ ಹೆಚ್ಚಿನ ಜಮೀನು‌ ಭೂಸ್ವಾಧೀನ ಪರಿಹಾರ ಒದಗಿಸಲು ಅನುಕೂಲವಾಗುವಂತೆ ಹೆಚ್ಚಿನ ಪರಿಹಾರ ನೀಡಲು ಕಡತವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ಅನುದಾನ:

ರಾಜ್ಯದಲ್ಲಿ ಒಟ್ಟಾರೆ 6928 ಕೋಟಿ ರೂಪಾಯಿ ಸ್ಮಾರ್ಟ್ ಸಿಟಿ ಯೋಜನೆಗೆ ಬಿಡುಗಡೆಯಾಗಿದ್ದು, ಇದರಲ್ಲಿ 3500 ಕೋಟಿ ರಾಜ್ಯದ ಪಾಲು ಇದೆ.

ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ಸರಕಾರ‌ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರಾಭಿವೃದ್ಧಿ ಇಲಾಖೆಯ ಸವರಾದ ಭೈರತಿ ಸುರೇಶ್..

ರಾಜ್ಯ ಹಾಗೂ ಕೇಂದ್ರ ಸರಕಾರದ ಸಹಭಾಗಿತ್ವದ ಸ್ಮಾರ್ಟ್ ಸಿಟಿ ಯೋಜನೆಯಡಿ ಅತ್ಯಾಧುನಿಕ ಕಲಾ ಮಂದಿರ ಹಾಗೂ ವಾಣಿಜ್ಯ ಮಳಿಗೆ ಸ್ಥಾಪಿಸಲಾಗಿದೆ.
ಉತ್ತರ ಕರ್ನಾಟಕದಲ್ಲಿ ಸುಸಜ್ಜಿತ ವಾಣಿಜ್ಯ ಸಂಕೀರ್ಣ ಇದಾಗಿದೆ.
ರಾಜ್ಯದ ಎಲ್ಲೆಡೆ ವಾಣಿಜ್ಯ ಸಂಕೀರ್ಣ, ಬಸ್ ನಿಲ್ದಾಣ ಮತ್ತಿತರ ಮೂಲಸೌಕರ್ಯಗಳನ್ನು ಕಲ್ಪಿಸಲು ಮುಖ್ಯಮಂತ್ರಿಗಳು ಮುಂದಾಗಿದ್ದಾರೆ.
ಸಾರ್ವಜನಿಕರು ಈ ಸೌಲಭ್ಯಗಳ ಸದ್ಬಳಕೆ‌ ಮಾಡಿಕೊಳ್ಳಬೇಕು ಎಂದು ಭೈರತಿ ಸಲಹೆ ನೀಡಿದರು.

ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದ ಎಲ್ಲ ಪೌರಕಾರ್ಮಿಕರರಿಗೆ ಸ್ಥಳೀಯ ಸಂಸ್ಥೆಗಳ ಮೂಲಕವೇ ವೇತನ ನೀಡುವುದರ ಜತೆಗೆ ಅವರನ್ನು ಸರಕಾರಿ ನೌಕರರಾಗಿ ಪರಿಗಣಿಸಲು ಕ್ರಮ ತೆಗೆದುಕೊಳ್ಳಲಾಗುವುದು.

ಎರಡು ದಾಖಲೆಗಳಿದ್ದರೆ ಕ್ರಯಪತ್ರ ಜತೆಗೆ ವಿದ್ಯುತ್ ಹಾಗೂ ನೀರು ಸರಬರಾಜು ಬಿಲ್ ಗಳನ್ನು ಕೂಡ ಪರಿಗಣಿಸಿ ಇ-ಖಾತೆ ಮಾಡಿಕೊಡಲು ಸರಕಾರ ನಿರ್ಧರಿಸಿದೆ.
ಬೆಳಗಾವಿ ನಗರದಲ್ಲಿ 50 ಸಾವಿರಕ್ಕೂ ಅಧಿಕ ಆಸ್ತಿಗಳಿಗೆ ಇ-ಖಾತೆ ಮಾಡಿಕೊಡಲಾಗುವುದು.
ತಲಾ 200 ಕೋಟಿ ರೂಪಾಯಿಯಂತೆ ರಾಜ್ಯದ 10 ಮಹಾನಗರ ಪಾಲಿಕೆಗಳಿಗೆ ಒಟ್ಟಾರೆ 2000 ಕೋಟಿ ರೂಪಾಯಿ ಅನುದಾನ ನೀಡಲಾಗುತ್ತಿದೆ ಎಂದು ಸಚುವ ಭೈರತಿ ಸುರೇಶ್ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಅಭಯ್ ಪಾಟೀಲ…

ರಾಜ್ಯದಲ್ಲಿ ಬೆಳಗಾವಿಯಲ್ಲಿ ಮಾತ್ರ ಸ್ಮಾರ್ಟ್ ಸಿಟಿ ಯೋಜನೆಯಡಿ ವಿಶಿಷ್ಟ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಭಯ್ ಪಾಟೀಲ ಹೇಳಿದರು.

165 ಕೋಟಿ ರೂಪಾಯಿ ವೆಚ್ಚದಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ನಿರ್ಮಿಸಲಾಗುತ್ತಿರುವ ತ್ಯಾಜ್ಯ ಶುದ್ಧೀಕರಣ ಘಟಕಕ್ಕೆ ಇನ್ನೂ 17 ಎಕರೆ ಭೂಸ್ವಾಧೀಕನಕ್ಕೆ ಅನುಕೂಲವಾಗುವಂತೆ ಐದು ಕೋಟಿ ರೂಪಾಯಿ ಅನುದಾನವನ್ನು ಒದಗಿಸಬೇಕು ಎಂದು ಶಾಸಕ ಅಭಯ್ ಪಾಟೀಲ ಮನವಿ ಅವರು ಮುಖ್ಯಮಂತ್ರಿಗಳಿಗೆ ಮಾಡಿಕೊಂಡರು‌.

ವರದಿ ಪ್ರಕಾಶ್ ಬಸಪ್ಪ ಕುರಗುಂದ..