ಡಾ ರವಿ ಪಾಟೀಲ್ ಆರೋಗ್ಯ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ..

ಡಾ ರವಿ ಪಾಟೀಲ್ ಆರೋಗ್ಯ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ..

ವೈದ್ಯಕೀಯ ಕ್ಷೇತ್ರದಲ್ಲಿ ಡಾ ರವಿ ಪಾಟೀಲ್ ಸಂಸ್ಥೆಗಳ ಸೇವೆ ಶ್ಲಾಘನೀಯ..

ಮಾಜಿ ಉಪ ಮುಖ್ಯಮಂತ್ರಿ ಡಾ ಅಶ್ವತ ನಾರಾಯಣ..

ಬೆಳಗಾವಿ : ಡಾ. ರವಿ ಪಾಟೀಲ್ ಆರೋಗ್ಯ ಸಂಸ್ಥೆಗಳ ಅಡಿಯಲ್ಲಿ ಬಿಎಸ್ಸಿ ನರ್ಸಿಂಗ್, ಬಿಎಸ್ಸಿ ಅಲೈಡ್ ಹೆಲ್ತ್ ಸೈನ್ಸಸ್, ಜಿಎನ್ಎಂ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ವಿವಿಧ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭವನ್ನು ನಡೆಸಿದ್ದಾರೆ.

ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ್ ಮತ್ತು ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ. ಎಂ. ಜಿ. ಮುಲೇ, ಗೌರವಾನ್ವಿತ ಎಂಎಲ್‌ಸಿ ಮತ್ತು ಮರಾಠಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರುಗಳು ಈ ಪದವಿ ಪ್ರದಾನ ಸಮಾರಂಭದಲ್ಲಿ ಗೌರವಾನ್ವಿತ ಅತಿಥಿಗಳಾಗಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು ಸಮಾಜಕ್ಕೆ ಆರೋಗ್ಯ ವೃತ್ತಿಪರರ ಅಗತ್ಯ ಮತ್ತು ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು, ಜಾಗತಿಕವಾಗಿ ಆರೋಗ್ಯ ಕ್ಷೇತ್ರದ ಉದ್ಯೋಗಗಳಲ್ಲಿ ಬೇಡಿಕೆಯನ್ನು ಹೆಚ್ಚಿಸಿದ್ದಾರೆ ಎಂದರು.

ಕರ್ನಾಟಕದ ಈ ಭಾಗದಲ್ಲಿ ಆರೋಗ್ಯ ಶಿಕ್ಷಣವನ್ನು ರೂಪಿಸುವಲ್ಲಿ ಡಾ. ರವಿ ಪಾಟೀಲ್ ಆರೋಗ್ಯ ಸಂಸ್ಥೆಗಳ ಅಧ್ಯಕ್ಷ ಡಾ. ರವಿ ಪಾಟೀಲ್ ಮಾಡಿದ ಕಾರ್ಯ ಹಾಗೂ ಪ್ರಯತ್ನಗಳು ಶ್ಲಾಘನೀಯ ಎಂದು ಮುಖ್ಯ ಅತಿಥಿಗಳು ಬನ್ನಿಸಿದ್ದಾರೆ.

ಅವರ ಮಾರ್ಗದರ್ಶನ ಮತ್ತು ಪ್ರೇರಣೆ ಆರೋಗ್ಯ ವೃತ್ತಿಪರರ ಯುವ ಪದವೀಧರರಿಗೆ ಸ್ಫೂರ್ತಿ ನೀಡಿದ್ದು,
ಡಾ. ರವಿ ಪಾಟೀಲ್ ಮತ್ತು ಅವರ ಶಿಕ್ಷಕರ ತಂಡವು, ಹಾಗೂ ಸಿಬ್ಬಂದಿಗಳು ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯ ಅತಿಥಿಗಳಿಗೆ ಕೃತಜ್ಞತೆ ಸಲ್ಲಿಸಿದರು.

Leave a Reply

Your email address will not be published. Required fields are marked *