ಪಾಕಿಸ್ತಾನ ಪ್ರಜೆಗಳನ್ನು ರಾಜ್ಯದಿಂದ ಹೊರಹಾಕಬೇಕೆಂದು ಬಿಜೆಪಿಯಿಂದ ಪ್ರತಿಭಟನೆ..
ಬೆಳಗಾವಿ : ರಾಜ್ಯ ಹಾಗೂ ಜಿಲ್ಲೆಯಲ್ಲಿ ಇರುವಂತಹ ಪಾಕಿಸ್ತಾನ ಪ್ರಜೆಗಳನ್ನು ಹೊರಹಾಕಲು ಹಿಂಜರಿಯುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ವಿರೋಧಿಸಿ ಇಂದು ಬೆಳಗಾವಿ ಜಿಲ್ಲಾ ಬಿಜೆಪಿ ಘಟಕದಿಂದ ನಗರದ ರಾಣಿ ಚೆನ್ನಮ್ಮ ವೃತ್ತದ ಹತ್ತಿರ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ, ಮಾಜಿ ಶಾಸಕರಾದ ಸಂಜಯ್ ಪಾಟೀಲ್ ಹಾಗೂ ಮಹಾಂತೇಶ ದೊಡ್ಡಗೌಡರ ಮಾತನಾಡಿ ಸರ್ಕಾರದ ನಡೆಯನ್ನು ಖಂಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ
ಎಲ್ ಮುತ್ತೆನ್ನವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ದೇಶಪಾಂಡೆ, ರಾಜಶೇಖರ್ ದೋಣಿ ಈರಯ್ಯ ಖೋತ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಈರಣ್ಣ ಅಂಗಡಿ, ಜಿಲ್ಲಾ ಉಪಾಧ್ಯಕ್ಷ ಮಾರುತಿ ಕೊಪ್ಪದ, ವಿನಯ್ ಕದಂ, ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಮಹಾನಗರ ಪಾಲಿಕೆ ಸದಸ್ಯರಾದ ಹನುಮಂತ ಕೊಂಗಾಲಿ, ಪ್ರಕೋಷ್ಠಗಳ ಸಂಯೋಜಕ ಮಹೇಶ್ ಮೋಹಿತೆ, ಮಹಿಳಾ ಮೋರ್ಚಾ ಅಧ್ಯಕ್ಷರಾದ ನಯನಾ ಬಸ್ಮೆ, ಶಿಲ್ಪಾ ಕೆಕರೆ, ಶ್ವೇತಾ ಜಗದಾಳೆ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಯಲ್ಲೇಶ್ ಕೊಲಕಾರ, ಮುಖಂಡರಾದ ಮುರುಗೇಂದ್ರಗೌಡ ಪಾಟೀಲ, ಚೇತನ್ ಅಂಗಡಿ, ಸಿ.ಬಿ ಪಾಟೀಲ, ಮಂಡಲ ಅಧ್ಯಕ್ಷರುಗಳಾದ ಬಸವರಾಜ ಸಾಣಿಕೋಪ್ಪ, ಕೆ.ವಿ ಪಾಟೀಲ, ಮಹಾದೇವ ಶೆಕ್ಕಿ, ಬಸವರಾಜ ಬಂಡಿವಡ್ಡರ, ಮನೋಜ್ ಪಾಟೀಲ, ಪ್ರಶಾಂತ್ ಅಮ್ಮಿನಭಾವಿ, ವಿಠ್ಠಲ ಸಾಯಣ್ಣವರ, ವೀರಭದ್ರ ಪೂಜಾರಿ, ಮಹಾಂತೇಶ ಕುಡಚಿ ಹಾಗೂ ಪ್ರಮುಖ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು..