ಪಿಡಿಓ ಮೇಲೆ ಹಲ್ಲೆ ಮಾಡಿದವರ ಮೇಲೆ ಕ್ರಮ ಜರುಗಿಸಿ..

ಪಿಡಿಓ ಮೇಲೆ ಹಲ್ಲೆ ಮಾಡಿದವರ ಮೇಲೆ ಕ್ರಮ ಜರುಗಿಸಿ..

ಜಿಲ್ಲಾ ಪಿಡಿಓ ಸಂಘಟನೆಯಿಂದ ಪ್ರತಿಭಟನೆ..

ಬೆಳಗಾವಿ : ನಿಯಮಬಾಹಿರವಾಗಿ ಆಸ್ತಿ ದಾಖಲೆ ಕೊಡುತ್ತಿಲ್ಲ ಎಂಬ ಕಾರಣಕ್ಕೆ ಪಿಡಿಒ ಮೇಲೆ ಹಲ್ಲೆ ಮಾಡಿದ್ದ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿ ಪಿಡಿಒ ಸಂಘಟನೆಯ ಜಿಲ್ಲಾ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ನಕಲಿ ದಾಖಲೆ ಆಧಾರದ ಮೇಲೆ ಆಸ್ತಿ ಉತಾರ ನೀಡುವಂತೆ ಮಾಡಮಗೇರಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜಯಗೌಡ ಪಾಟೀಲ್ ಎಂಬುವವರಿಗೆ ಪದೇ ಪದೇ ಕಿರುಕುಳ ನೀಡಲಾಗಿದೆ. ಕೊನೆಗೂ ನಿಯಮಬಾಹಿರ ಕೆಲಸಕ್ಕೆ ಒಪ್ಪಿಕೊಳ್ಳದ ಪಿಡಿಒ ಮೇಲೆ ನಾಲ್ವರು ಕಳೆದ ಸೋಮವಾರ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ಮಾಡಿದ್ದ ಮಾಡಮಗೇರಿ ಗ್ರಾಮದ ಪರಮೇಶ್ ಚತ್ರಕೋಟಿ, ಹನಮಂತ ಸಿದ್ದಣ್ಣವರ, ಸಿದ್ದಪ್ಪ ಚಿಕ್ಕಣ್ಣವರ, ಯಲ್ಲಪ್ಪ ಕೆಮ್ಮಣಕೋಲ ಎಂಬುವವರ ಮೇಲೆ ಸರಕಾರಿ ಅಧಿಕಾರಿ ಕರ್ತವ್ಯದಲ್ಲಿರುವ ವೇಳೆ ಹಲ್ಲೆ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ ಆದರೆ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.