ಬೆಳಗಾವಿಯಲ್ಲಿ ಬೇಳಿಗ್ಗೆನೆ ಘಟಿಸಿದ ಹೃದಯ ಹಿಂಡುವ ದುರ್ಘಟನೆ..!!!

ಬೆಳಗಾವಿಯಲ್ಲಿ ಬೇಳಿಗ್ಗೆನೆ ಘಟಿಸಿದ ಹೃದಯ ಹಿಂಡುವ ದುಘಟನೆ..!!!

ಬೆಳಗಾವಿ: ಶಾಟ್೯ ಸರ್ಕ್ಯೂಟ್ ನಿಂದ ಅಜ್ಜ, ಅಜ್ಜಿ ಮತ್ತು ಮೊಮ್ಮಗಳು ಸ್ಥಳದಲ್ಲೆ ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ಶಾಹುನಗರದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.

ಮನೆಯಲ್ಲಿ ನೀರು ಕಾಯಿಸಲು ಕ್ವಾಯಿಲ್ ಹಾಕಿದ ವೇಳೆ ಮೊದಲಿಗೆ ಮೊಮ್ಮಗಳಿಗೆ ವಿದ್ಯುತ್ ತಗುಲಿದೆ, ನಂತರ ಮಗಳನ್ನು ಕಾಪಾಡಲು ಅಜ್ಜ-ಅಜ್ಜಿ ಹೋದಾಗ ಅವರಿಗೂ ವಿದ್ಯುತ್ ತಾಗಿ, ಮೂವರು ಸ್ಥಳದಲ್ಲೆ ಕೊನೆಯುಸಿರೆಳೆದಿದ್ದಾರೆ.

ಬೆಳಗಾವಿಯ‌ ಶಾಹು ನಗರ 7 ನೇ ಕ್ರಾಸ್ ನ ನಿರ್ಮಾಣ ಹಂತದ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಮೃತರು ಮೂಲತಃ ರಾಮದುರ್ಗ ತಾಲೂಕಿನ ಅರಬೆಂಚಿ ತಾಂಡಾದ ಈರಪ್ಪಾ ಗಂಗಪ್ಪ ಲಮಾನಿ(50), ಶಾಂತವ್ವ ಈರಪ್ಪಾ ಲಮಾನಿ(45) ಮತ್ತು ಅನ್ನಪೂರ್ಣ ಹುನ್ನಪ್ಪಾ ಲಮಾನಿ(8) ಎಂದು ಗುರುತಿಸಲಾಗಿಸೆ.

ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದಾರೆ. ಸ್ಥಳಕ್ಕೆ ಎಪಿಎಂಸಿ ಪೊಲೀಸರು ಮತ್ತು ಹೆಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವರದಿ ಪ್ರಕಾಶ ಕುರಗುಂದ..