ಬೆಳಗಾವಿ ಜಿಲ್ಲಾಧಿಕಾರಿಗಳಿಂದ ಗಣೇಶ ಪ್ರತಿಷ್ಠಾಪನೆ..

ಬೆಳಗಾವಿ ಜಿಲ್ಲಾಧಿಕಾರಿಗಳಿಂದ ಗಣೇಶ ಪ್ರತಿಷ್ಠಾಪನೆ..

ವಿಘ್ನ ವಿನಾಯಕನಿಗೆ ಪೂಜೆ ಸಲ್ಲಿಸಿದ ಡಿಸಿ ಮೊಹಮ್ಮದ್ ರೋಷನ್ ಪರಿವಾರ..

ಬೆಳಗಾವಿ : ಸದಾ ಭಾವೈಕ್ಯತೆ, ವಿವಿಧತೆಯಲ್ಲಿ ಏಕತೆಯ ಹಾಗೂ ಮಾನವೀಯತೆಯ ಬಗ್ಗೆ ಸಂದೇಶ ಸಾರುವ ಬೆಳಗಾವಿಯ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರು ಹಿಂದೂಗಳ ದೊಡ್ಡ ಹಾಗೂ ಪವಿತ್ರ ಧಾರ್ಮಿಕ ಹಬ್ಬವಾದ ಗಣೇಶ ಚತುರ್ಥಿಯಂದು ಗಣೇಶನನ್ನು ಪ್ರತಿಷ್ಠಾಪನೆ ಮಾಡಿ ಮನುಕುಲ ನಾವೆಲ್ಲಾ ಒಂದೇ ಎಂಬ ಸಂದೇಶ ಸಾರಿದ್ದಾರೆ.

ಬುಧವಾರ ನಗರದೆಲ್ಲೆಡೆ ಭಕ್ತಾದಿಗಳು ಗಣೇಶನನ್ನು ಪ್ರತಿಷ್ಠಾಪನೆ ಮಾಡುವ ಸಡಗರದಲ್ಲಿದ್ದು, ಜಿಲ್ಲಾಧಿಕಾರಿಗಳು ತಮ್ಮ ಪರಿವಾರದೊಂದಿಗೆ ಚೆನ್ನಮ್ಮ ವೃತ್ತದಲ್ಲಿ ಇರುವ ಗಣೇಶ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾಂಪ್ರದಾಯಿಕವಾಗಿ ಪರಿಸರಪ್ರೇಮಿ ಗಣೇಶನನ್ನು ಪ್ರತಿಷ್ಠಾಪಿಸಲು ಅಣಿಯಾಗಿದ್ದಾರೆ.

ಈ ವೇಳೆ ಜಿಲ್ಲಾಧಿಕಾರಿಗಳ ಕುಟುಂಬದವರೊಂದಿಗೆ, ಅಪರ ಜಿಲ್ಲಾಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು..