ಶಕ್ತಿ ದೇವತೆ ರೇಣುಕಾ ಯಲ್ಲಮ್ಮನ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ..
ದೇವಸ್ಥಾನದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಅವರಿಂದ ಚಾಲನೆ..
ಬೆಳಗಾವಿ : ರಾಜ್ಯ ಹಾಗೂ ಹೊರರಾಜ್ಯಗಳ ಭಕ್ತರ ಇಷ್ಟಾರ್ಥಗಳನ್ನು ತಪ್ಪದೇ ಈಡೇರಿಸುವ ಶಕ್ತಿ ದೇವತೆ, ಎಳು ಕೊಳ್ಳದ ಯಲ್ಲಮ್ಮ ದೇವಿಯ ದರ್ಶನವನ್ನು ಇಂದು ಭಾನುವಾರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಇತರ ಸಚಿವರು ಪಡೆದುಕೊಂಡಿದ್ದಾರೆ..

ಹುಬ್ಬಳ್ಳಿಯಿಂದ ರಸ್ತೆ ಮೂಲಕ ಸವದತ್ತಿ ಎಲ್ಲಮ್ಮ ದೇವಸ್ಥಾನಕ್ಕೆ ಆಗಮಿಸಿದ ಸಿಎಂ ಮತ್ತು ತಂಡ, ರೇಣುಕಾದೇವಿಯ ದರ್ಶನ ಪಡೆದು, ಅವರ ನೇತೃತ್ವದಲ್ಲಿ ರೇಣುಕಾದೇವಿ ಪ್ರವಾಸೋಧ್ಯಮ ಅಭಿವೃದ್ಧಿ ಮಂಡಳಿ ಹಾಗೂ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯನ್ನು ನಡೆಸಿದ್ದು ಅಭಿವೃದ್ಧಿ ದೃಷ್ಟಿಯಿಂದ ಮಹತ್ತರ ಚರ್ಚೆ ನಡೆಸಿದ್ದಾರೆ.
ರೇಣುಕಾ ದೇವಿ ದೇವಸ್ಥಾನದ ಉನ್ನತಿಕರಣಕ್ಕಾಗಿ ಬೆಳಗಾವಿ ಜಿಲ್ಲಾಡಳಿತದಿಂದ ಒಂದು ಯೋಜನೆ ರಚಿಸಲ್ಪಟ್ಟಿದ್ದು, ಆ ಯೋಜನೆಯ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದ್ದು ಸರ್ಕಾರದ ಮುಂದಿನ ನಿರ್ದೇಶನದಂತೆ ಚಾಲನೆಗೊಳ್ಳಲಿದೆ.

ಸಭೆಯ ನಂತರ ದೇವಸ್ಥಾನದ ಇತರ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಹಾಗೂ ಸಚಿವರ ತಂಡ ಚಾಲನೆ ನೀಡುತ್ತಿದ್ದು, ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಪ್ರವಾಸೋಧ್ಯಮ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸ್ಥಳೀಯ ಶಾಸಕ ವಿಶ್ವಾಸ ವೈದ್ಯ, ಮತ್ತಿತರರು ಉಪಸ್ಥಿತರಿದ್ದರು..
ವರದಿ ಪ್ರಕಾಶ್ ಬಸಪ್ಪ ಕುರಗುಂದ..