ಸಿಟಿ ರವಿ ಕೇಸ್‌ ಮುಂದುವರೆಸುವುದರಲ್ಲಿ ಅರ್ಥವಿಲ್ಲ..

ಸಿಟಿ ರವಿ ಕೇಸ್‌ ಮುಂದುವರೆಸುವುದರಲ್ಲಿ ಅರ್ಥವಿಲ್ಲ..

ಸಿ ಟಿ ರವಿಯನ್ನು ರಾತ್ರಿಯೇ ಕೋರ್ಟಿಗೆ ಹಾಜರ್ ಮಾಡುವಂತೆ ಹೇಳಿದ್ದೆ..

ಯಾರ ನಿರ್ದೇಶನದ ಮೇಲೆ ಠಾಣೆಯಿಂದ ಠಾಣೆಗೆ ಸುತ್ತಾಡಿಸಿದ್ದಾರೆ ಗೊತ್ತಿಲ್ಲ..

ಸಚಿವ ಸತೀಶ ಜಾರಕಿಹೊಳಿ..

ಬೆಳಗಾವಿ : ಇಂದು ನಗರದ ಕಾಂಗ್ರೆಸ್ ಭವನದಲ್ಲಿ ಸಿಟಿ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು ಘಟನೆ ಆಗಿ ಹೋಗಿದೆ, ಅದನ್ನು ಮತ್ತೆ ಮುಂದುವರಿಸುವದರಲ್ಲಿ ಅರ್ಥ‌ ಇಲ್ಲ. ದೇಶದಲ್ಲಿ ಇಂಥ ಘಟನೆಗಳು ಹೊಸದಲ್ಲ, ಈ ಹಿಂದೆ ಸಂಸತ್ತು, ವಿಧಾನಸಭೆಯಲ್ಲಿ ನಡೆದಿವೆ.

ಕ್ಷಮೆ ಕೇಳಿದ ಬಳಿಕ ಮುಗಿದು ಹೋಗಿವೆ, ಈಗಲೂ ಮುಗಿಸೋದು ಒಳ್ಳೆಯದು, ಸಾರ್ವಜನಿಕವಾಗಿ ಈ ಪ್ರಕರಣ ಮುಂದುವರೆಸುವುದು ಅನವಶ್ಯಕ ಎಂದರು.

ಸಿ.ಟಿ ರವಿಗೆ ತೊಂದರೆ ಆಗಬಾರದೆಂಬ ಕಾರಣಕ್ಕೆ ಖಾನಾಪುರದಿಂದ ಶಿಫ್ಟ್ ಮಾಡಿದ್ದರು, ಯಾರ ನಿರ್ದೇಶನ ಮೇರೆಗೆ ಸಿ.ಟಿ ರವಿಯನ್ನು ಠಾಣೆಯಿಂದ ಠಾಣೆಗೆ ಸುತ್ತಾಡಿಸಿದ್ದಾರೆ ಎಂಬುದು ನಂಗೆ ಗೊತ್ತಿಲ್ಲ. ಸಿ.ಟಿ ರವಿಯನ್ನು ರಾತ್ರಿಯೇ ಕೋರ್ಟ್‌ಗೆ ಹಾಜರು ಮಾಡುವಂತೆ‌ ನಾನು ಪೊಲೀಸರಿಗೆ ಹೇಳಿದ್ದೆ.

ಬೆಳಗಾವಿ ‌ಪೊಲೀಸರು ಅಷ್ಟು ಮಾಡಿದ್ರೆ ಇಷ್ಟೇಲ್ಲ ಆಗುತ್ತಿರಲಿಲ್ಲ, ಸಿಟಿ ರವಿ ಅವರಿಗೆ ರಕ್ಷಣೆ ನೀಡುವ ಉದ್ದೇಶದಿಂದ ಪೊಲೀಸರು ಅವರನ್ನು ರೌಂಡ್ಸ್‌ ಹೊಡಿಸಿದ್ದಾರೆ ಎಂಬ ಮಾಹಿತಿಯಿದ್ದು ಇದರಲ್ಲಿ ಬೇರೆ ಯಾವ ಉದ್ದೇಶ ಇಲ್ಲ, ಈ ಪ್ರಕರಣ ಮುಂದುವರೆಸುವುದರಲ್ಲಿ ಯಾವುದೇ ಅರ್ಥವಿಲ್ಲ.

ಏಕೆಂದರೆ ಅವರು ಅವಾಚ್ಯ ಶಬ್ದ ಬಳಿಸಿಲ್ಲವೆಂದು ಹೇಳುತ್ತಿದ್ದಾರೆ, ಹೀಗಾಗಿ ಈ ಕೇಸ್‌ ಇಲ್ಲಿಗೆ ಮುಗಿಸದರೆ ಒಳ್ಳೆಯದು, ಬೆಳಗಾವಿ ಸುವರ್ಣ ವಿಧಾನ ಸೌದಲ್ಲಿ ಇಂತಹ ಪ್ರಕರಣ ಈ ಹಿಂದೆ ಆಗಿರಲ್ಲಿಲ್ಲ ಎಂದಿದ್ದಾರೆ.