ಇಪ್ಪತ್ತು ವರ್ಷಗಳಿಂದ ಯುವಪ್ರತಿಭೆಗಳ ಪೋಷಣೆ, ಪ್ರೋತ್ಸಾಹ ಮಾಡುತ್ತಿರುವ ಸತೀಶ ಶುಗರ್ಸ್..
ಸತೀಶ ಶುಗರ್ಸ್ ಆವಾರ್ಡ್ಸನಲ್ಲಿ 5 ಸಾವಿರ ವಿದ್ಯಾರ್ಥಿಗಳು ಭಾಗಿ:
ರಿಯಾಜ ಚೌಗಲಾ ಸ್ಪಷ್ಟನೆ..
ಗೋಕಾಕ: ಜ. 19,20, 21 ರಂದು 20ನೇ ಸತೀಶ್ ಶುಗರ್ಸ್ ಆವಾರ್ಡ್ಸ ಸಾಂಸ್ಕೃತಿಕ ಕಾರ್ಯಕ್ರಮ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಭವ್ಯ ವೇದಿಕೆಯಲ್ಲಿ ಜರುಗಲಿವೆ ಎಂದು ಸತೀಶ್ ಶುಗರ್ಸ್ ಆವಾರ್ಡ್ಸ ಸಂಘಟಕ ರಿಯಾಜ ಚೌಗಲಾ ಹೇಳಿದರು.
ನಗರದ ಸತೀಶ್ ಶುಗರ್ಸ್ ಅಕ್ಯಾಡಮಿ ಕಾಲೇಜು ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, 19ನೇ ಸತೀಶ ಶುಗರ್ಸ್ ಆವಾರ್ಡ್ಸ ಭಾಷಣ ಸ್ವರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದು, 5 ಸಾವಿರ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು, ಅಂತಿಮ ಹಂತಕ್ಕೆ ಒಟ್ಟು 700 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು ಎಂದು ತಿಳಿಸಿದರು.

ಜ. 19 ರಂದು ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಗಾಯನ ಸ್ವರ್ಧೆ, ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಜಾನಪದ ಗಾಯನ ಸ್ವರ್ಧೆ, ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳಿಗೆ ಜಾನಪದ ನೃತ್ಯ ಸ್ವರ್ಧೆ ಹಾಗೂ ಮುಕ್ತ ವಿಭಾಗಕ್ಕೆ ಸಮೂಹ ನೃತ್ಯ ಸ್ವರ್ಧೆ ಜರುಗಲಿದ್ದು, ಇದೇ ದಿನ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗೂ ಕಾಲೇಜು ವಿಭಾಗದ ಭಾಷಣ ಸ್ವರ್ಧಾ ವಿಜೇತರಿಗೆ ಮತ್ತು ಸದರಿ ದಿನದಂದು ನಡೆದ ಸ್ವರ್ಧೆಯಲ್ಲಿ ಭಾಗವಹಿಸಿ ವಿಜೇರಾದ ವಿದ್ಯಾರ್ಥಿಗಳಿಗೆ ಗಣ್ಯರಿಂದ ಬಹುಮಾನ ವಿತರಿಸಲಾಗುವುದು ಎಂದರು.
ಜ. 20 ರಂದು ಗಾಯನ ಸ್ವರ್ಧೆ ಮುಕ್ತ ವಿಭಾಗ, ಜಾನಪದ ಗಾಯನ ಕಾಲೇಜು ವಿಭಾಗ, ಜಾನಪದ ನೃತ್ಯ ಪ್ರಾಥಮಿಕ ಶಾಲಾ ವಿಭಾಗ ಹಾಗೂ ಕಾಲೇಜು ವಿಭಾಗ ಸಮೂಹ ನೃತ್ಯ ಸ್ವರ್ಧೆಗಳು ನಡೆಯಲಿದ್ದು, ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಪ್ರತಿಭಾವಂತರಿಗೆ ಸನ್ಮಾನ ಹಾಗೂ ಸದರಿ ದಿನ ನಡೆದ ಸ್ವರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ ಎಂದು ಹೇಳಿದರು.

ಬಹುಮಾನ ವಿತರಣೆ: ಜ. 21 ಎಂದು ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ಗಾಯನ ಸ್ವರ್ಧೆ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗಾಯನ ಸ್ವರ್ಧೆ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮೂಹ ನೃತ್ಯ , ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮೂಹ ನೃತ್ಯ ಸ್ವರ್ಧೆ ನಡೆಯಲಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಸದರಿ ದಿನ ವಿಜೇತ ವಿದ್ಯಾರ್ಥಿಗಳಿಗೆ ಲೋಕೋಪಯೋಗಿಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಮತ್ತು ಗಣ್ಯರು ಬಹುಮಾನ ವಿತರಿಸುವವರು.
ಸಾರ್ವಜನಿಕರಿಗೆ ಕುಳಿತು ಕಾರ್ಯಕ್ರಮ ವೀಕ್ಷಿಸಲು 12 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಪ್ರತಿದಿನ ಸಂಜೆ 5 ಘಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಸಂಘಟಕರು ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ಸತೀಶ್ ಶುಗರ್ಸ ಆವಾರ್ಡ್ಸ ಸಂಘಟಕ, ಪತ್ರಕರ್ತ ಸಾದಿಕ ಹಲ್ಯಾಳ, ಪ್ರಾಚಾರ್ಯ ಪಿ.ಎಂ ಲಕ್ಕಶೆಟ್ಟಿ, ಪೌಂಡೇಶನ್ ಸದಸ್ಯ ಸುರೇಶ್ ಜೋರಾಪೂರ ಉಪಸ್ಥಿತರಿದ್ದರು.
ವರದಿ ಪ್ರಕಾಶ ಕುರಗುಂದ..