ಜಿಲ್ಲಾ ಗಾಣಿಗ ಸಮುದಾಯದ ಬೆಂಬಲ ಪಡೆದ ಬಿಜೆಪಿ ಅಭ್ಯರ್ಥಿ..!!!

ಜಿಲ್ಲಾ ಗಾಣಿಗ ಸಮುದಾಯದ ಸಂಪೂರ್ಣ ಬೆಂಬಲ ಪಡೆದ ಬಿಜೆಪಿ ಅಭ್ಯರ್ಥಿ..!!!

ಹುಬ್ಬಳ್ಳಿ ಮಾದರಿಯಲ್ಲಿಯೇ ಬೆಳಗಾವಿ ಅಭಿವೃದ್ಧಿ ಮಾಡುವೆ..!!!

ಇಲ್ಲಿ ಹೆಚ್ಚು ಉತ್ಪಾದಕ, ಐಟಿ ಉದ್ದಿಮಗಳನ್ನು ತಂದು, ಸಮಗ್ರ ಅಭಿವೃದ್ಧಿಯೊಂದಿಗೆ ಮಾದರಿ ಕ್ಷೇತ್ರ ಮಾಡುತ್ತೇನೆ..!!!

ಬೆಳಗಾವಿ : ರವಿವಾರ ಸಂಜೆ ನಗರದ ಖಡೇಬಜಾರದಲ್ಲಿರುವ ಖಾಸಗಿ ಸ್ಥಳದಲ್ಲಿ ಜಿಲ್ಲಾ ಗಾಣಿಗ ಸಮಾಜದ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ, ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಮಾತನಾಡಿ ಬೆಳಗಾವಿ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗುವಂತೆ ಅಭಿವೃದ್ಧಿ ಮಾಡುವದೇ ನನ್ನ ಗುರಿ ಎಂದಿದ್ದಾರೆ..

ಬೆಳಗಾವಿ ಜಿಲ್ಲಾ ಗಾಣಿಗ ಸಮಾಜದ ವತಿಯಿಂದ ಸ್ವಾಗತ ಸ್ವೀಕರಿಸಿ ಮಾತನಾಡಿದ ಶೆಟ್ಟರ್ ಅವರು, ಮೋದಿಯವರು ದೇಶ ಅಲ್ಲಾ ವಿಶ್ವ ಕಂಡ ಮಹಾ ನಾಯಕ, ಕಳೆದ ಹತ್ತು ವರ್ಷದಲ್ಲಿ ಭಾರತವನ್ನು ವಿಶ್ವ ಮಟ್ಟದಲ್ಲಿ ಉನ್ನತ ಸ್ಥಾನದಲ್ಲಿ ನಿಲ್ಲುವಂತೆ ಮಾಡಿದ ಪ್ರಧಾನಿ ಎಂದರು, ದೇಶದ ಭದ್ರತೆ, ಆರ್ಥಿಕ ಪ್ರಗತಿ, ಭ್ರಷ್ಟ ಮುಕ್ತ ಆಡಳಿತ, ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಯೋಜನೆಗಳು, ಅವುಗಳನ್ನು ಕಾರ್ಯರೂಪಕ್ಕೆ ತಂದು ಇಂದು ಭಾರತ ದೇಶವನ್ನು ಬಲಿಷ್ಠ ಮಾಡಿದ್ದು ಇಡೀ ಭಾರತೀಯರ ಹೆಮ್ಮೆ ಎಂದಿದ್ದಾರೆ..

ಇನ್ನು ದೇಶ, ಧರ್ಮ, ಸಂಸ್ಕೃತಿ ವಿಚಾರವಾಗಿ ದೇಶ ಕಾಯುವ ಯೋಧನಾಗಿ ಕೆಲಸ ಮಾಡಿದ್ದು, ದೇಶವಾಸಿಗಳ ನೂರಾರು ವರ್ಷದ ಕನಸಾದ ರಾಮ ಮಂದಿರದ ನಿರ್ಮಾಣ, ಬಹುಸಂಖ್ಯಾತರ ರಕ್ಷಣೆ, ಸಾಮಾಜಿಕ, ಧಾರ್ಮಿಕ ಭದ್ರತೆ ನೀಡಿ, ಅನ್ಯರಿಂದ ಆಗುತ್ತಿರುವ ತೊಂದರೆಗಳನ್ನು ತಡೆಹಿಡಿದಿದ್ದು ನಮ್ಮ ಪ್ರಧಾನಿ ಮೋದಿ ಎಂದಿದ್ದಾರೆ..

ನಮ್ಮ ದೇಶದ ಧೀಮಂತ ಪ್ರಧಾನಿಯವರೂ ಕೂಡಾ ಹಿಂದುಳಿದ ಸಮುದಾಯಕ್ಕೆ ಸೇರಿದ್ದು, ಎಲ್ಲಿಯೂ ಕೂಡಾ ತಾವು ಹಿಂದುಳಿದವರು ಎಂದು ಸೀಮಿತವಾಗಲಿಲ್ಲ, ದೇಶದ ಎಲ್ಲಾ ಜನರ ಅಭಿವೃದ್ಧಿಗಾಗಿ, ದೇಶದ ಸೇವಕನಾಗಿ ದುಡಿದಿದ್ದಾರೆ, ಆಸ್ತಿ ಸಂಪತ್ತು ಮಾಡಲಿಕ್ಕೆ ಅವರಿಗೆ ಮನೆ, ಮಕ್ಕಳು, ಸಂಬಂಧ ಅಂತಾ ಗೋಳಿಲ್ಲ, ದೇಶವೇ ಅವರ ಮನೆ ದೇಶದ ಪ್ರಜೆಗಳೇ ಅವರ ಬಂಧುಗಳು, ದೇಶದ ಉದ್ದಾರವೇ ಮೋದಿಜೀ ಅವರ ಕನಸಾಗಿದ್ದು ಅಂತಹ ನಾಯಕರು ನಮ್ಮ ದೇಶಕ್ಕೆ ದೊರಕಿದ್ದು ಭಾರತೀಯರ ಭಾಗ್ಯ ಎಂದಿದ್ದಾರೆ..

ಇನ್ನು ತಾವು ಜನಪ್ರತಿನಿಧಿಯಾಗಿ ಹುಬ್ಬಳ್ಳಿಯನ್ನು ಎಲ್ಲಾ ರೀತಿಯಲ್ಲಿಯೂ ಅಭಿವೃದ್ಧಿ ಮಾಡಿದ್ದು, ಅದಕ್ಕಿಂತ ಹೆಚ್ಚಿನ ರೀತಿಯಲ್ಲಿ ಬೆಳಗಾವಿಯನ್ನು ಅಭಿವೃದ್ದಿ ಮಾಡುವೆ ಎಂದು ಪ್ರಮಾಣ ಮಾಡುತ್ತೇನೆ, ಈಗಾಗಲೇ ದಿ, ಸುರೇಶ್ ಅಂಗಡಿ ಹಾಗೂ ಮಂಗಳ ಅಂಗಡಿ ಅವರ ಅವಧಿಯಲ್ಲಿ ರೈಲ್ವೆ ಹಾಗೂ ವೈಮಾನಿಕ ವಲಯಗಳಲ್ಲಿ ಸಾಕಷ್ಟು ಪ್ರಗತಿ ಆಗಿದ್ದು, ಮುಂದೆ ಇಲ್ಲಿ ವಿವಿಧ ಉತ್ಪಾದಕ ವಿದೇಶಿ ಕಂಪನಿಗಳನ್ನು, ಐಟಿ ಉದ್ದಿಮೆಗಳನ್ನು ತಂದು, ಉದ್ಯೋಗ ಸೃಷ್ಟಿಸಿ, ಜಿಲ್ಲೆಯನ್ನು ಅಭಿವೃದ್ಧಿ ದೃಷ್ಟಿಯಲ್ಲಿ ಮಾದರಿ ಜಿಲ್ಲೆಯಾಗಿ ಮಾಡುತ್ತೇನೆ ಎಂದರು..

ವರದಿ ಪ್ರಕಾಶ್ ಕುರಗುಂದ..