ಸಹಕಾರ ಕಾಯಿದೆ ಮತ್ತು ಕಾನೂನು ತಿದ್ದುಪಡಿ ಅಧ್ಯಯನ ಸಮಿತಿಯ ಯಶಸ್ವಿ ಸಭೆ..

ಸಹಕಾರ ಕಾಯಿದೆ ಮತ್ತು ಕಾನೂನು ತಿದ್ದುಪಡಿ ಅಧ್ಯಯನ ಸಮಿತಿಯ ಯಶಸ್ವಿ ಸಭೆ..

ಬೆಂಗಳೂರು: ಕರ್ನಾಟಕ ಸಹಕಾರ ಸಂಘಗಳ ಕಾಯಿದೆ 1959 ಮತ್ತು ನಿಯಮಗಳು 1960 ಹಾಗೂ ಕರ್ನಾಟಕ ಸೌಹಾರ್ದ ಸಹಕಾರ ಕಾಯಿದೆ 1997 ಮತ್ತು ನಿಯಮಗಳು 2004 ಇವುಗಳಿಗೆ ಕಾನೂನಾತ್ಮಕ ತಿದ್ದುಪಡಿ ತರುವ ಸಂಬಂಧ ರಚಿಸಿರುವ ಅಧ್ಯಯನ ಸಮಿತಿಯ ಮೊದಲನೇ ಸಭೆಯು ನಗರದ ವಿಧಾನಸೌಧದಲ್ಲಿ ದಿನಾಂಕ: 19/07/2023 ರಂದು ನಡೆಯಿತು.

ಈ ಸಭೆಯಲ್ಲಿ ಸಹಕಾರ ಸಚಿವರಾದ ಕೆ.ಎನ್. ರಾಜಣ್ಣ, ಶಾಸಕರಾದ ಲಕ್ಷ್ಮಣ ಸಂಗಪ್ಪ ಸವದಿ, ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಜಿ.ಟಿ. ದೇವೇಗೌಡ, ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಬೀಳಗಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಎಸ್.ಆರ್. ಪಾಟೀಲ್, ಶಾಸಕರಾದ ಅರೆಬೈಲ್ ಶಿವರಾಮ್ ಹೆಬ್ಬಾರ್, ಕೆ. ಷಡಕ್ಷರಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಎಂ.ಎನ್. ರಾಜೇಂದ್ರ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ರಾಜೇಂದ್ರ ರಾಜಣ್ಣ, ಸಹಕಾರ ಸಂಘಗಳ ನಿಬಂಧಕರಾದ ಕ್ಯಾಪ್ಟನ್ ಡಾ. ಕೆ. ರಾಜೇಂದ್ರ,

ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಎಂ.ಡಿ. ನರಸಿಂಹಮೂರ್ತಿ, ಸಹಕಾರ ಸಂಘಗಳ ನಿವೃತ್ತ ಅಪರ ನಿಬಂಧಕರಾದ ಜಿ.ಎಸ್. ರಮಣರೆಡ್ಡಿ, ಸಹಕಾರ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಎ.ಸಿ. ದಿವಾಕರ್, ಸಹಕಾರ ಅಪರ ನಿಬಂಧಕರು ಕೆ.ಎಂ. ಆಶಾ, ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಸ್. ನವೀನ್, ಕಾರ್ಯದರ್ಶಿ ಲಕ್ಷ್ನಿಪತಯ್ಯ ಮತ್ತಿತರರು ಭಾಗಿಯಾಗಿದ್ದರು..